22
ಮಂಗಳೂರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಎಎಸ್ಐ ಓರ್ವರು ರೈಲಿನಲ್ಲಿ ಅಸ್ವಾಭಾವಿಕವಾಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೃತಪಟ್ಟ ವ್ಯಕ್ತಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ನಿವಾಸಿ ಎ. ರಮಣೈ (45) ಎಂದು ತಿಳಿದು ಬಂದಿದೆ.
ಮಂಗಳೂರು-ಚೆನ್ನೈ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದಾಗ ಮಧ್ಯಾಹ್ನ ಅಸ್ವಸ್ಥಗೊಂಡರು. ಆರ್ಪಿಎಫ್ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ಯಾದವ್ ಮತ್ತು ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.