11
ಕಾಸರಗೋಡು: ಕಾಸರಗೋಡಿನ ಪಳ್ಳಿಕೆರೆಯಲ್ಲಿ ರೈಲು ಡಿಕ್ಕಿಯಾಗಿ ಯುವತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೃತ ಯುವತಿ ರ್ವತ್ತೂರು ತುರುತ್ತಿ ಅಲಿಪ್ಪುರದ ಕೀರ್ತನಾ (24) ಎಂದು ತಿಳಿದು ಬಂದಿದೆ.
ಭಾನುವಾರ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಳಿಕ ಸಂಬಂಧಿಕರು ಆಗಮಿಸಿ ಮೃತ ದೇಹದ ಗುರುತು ಪತ್ತೆಹಚ್ಚಿದ್ದಾರೆ. ಕೀರ್ತನಾ ತಾತ್ಕಾಲಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ನೀಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.