Home News ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ರಾತ್ರೋರಾತ್ರಿ ಮಠದಿಂದ ಓಡಿಸಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಇರುವಾಗಲೇ ಸಿಕ್ಕಬಿದ್ದ ಸ್ವಾಮೀಜಿ, ರಾತ್ರೋರಾತ್ರಿ ಮಠದಿಂದ ಓಡಿಸಿದ ಗ್ರಾಮಸ್ಥರು

by admin
0 comments

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ.

ಅಡವಿಸಿದ್ದರಾಮಶ್ರೀ ಸ್ವಾಮೀಜಿ ಮಹಿಳೆಯೊಂದಿಗೆ ಇರುವುದನ್ನು ಕಂಡ ಗ್ರಾಮಸ್ಥರು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿಯನ್ನು ತರಾಟೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭ ಕೆಲ ಯುವಕರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಮಹಿಳೆಯ ಮಗಳ ಬಟ್ಟೆ ಹರಿದು ಎಳೆದಾಡಿದ್ದಾರೆ ಎಂದು ಹೇಳಲಾಗಿದೆ.

ಬಾಗಲಕೋಟೆ ಮೂಲದ ಮಹಿಳೆ ಮತ್ತು ಮಗಳು ಮಠಕ್ಕೆ ಬಂದಿದ್ದು, ರಾತ್ರಿ ಮಠದಲ್ಲೇ ತಂಗಿದ್ದಾರೆ. ಮಹಿಳೆಯೊಂದಿಗೆ ಸ್ವಾಮೀಜಿ ಇದ್ದಾರೆಂದು ಯುವಕರು ಮಠಕ್ಕೆ ನುಗಿದ್ದು, ಈ ವೇಳೆ ಸ್ವಾಮೀಜಿ, ‌ಮಹಿಳೆ ಮತ್ತು ಬಾಲಕಿ ಒಂದೇ ರೂಮ್​ನಲ್ಲಿರುವುದು ಕಂಡುಬಂದಿದೆ.

ಇದೇ ವೇಳೆ ಯುವಕರು ಸ್ವಾಮೀಜಿಯನ್ನು ತಳ್ಳಿ ಮಹಿಳೆ, ಅಪ್ರಾಪ್ತ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿಯ ಬಟ್ಟೆ ಹರಿದು ಎಳೆದಾಡಿದ್ದಾರೆ. ರಕ್ಷಣೆಗೆ ನಿಂತ ಸ್ವಾಮೀಜಿಗೆ ಯುವಕರು ಕಪಾಳಮೋಕ್ಷ ಮಾಡಿದ್ದಾರೆ.

banner

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಮಹಿಳೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಇತ್ತ ಗ್ರಾಮಸ್ಥರು ರಾತ್ರಿಯೇ ಅಡವಿಸಿದ್ದರಾಮ ಸ್ವಾಮೀಜಿಯನ್ನು ಹೊರಹಾಕಿದ್ದಾರೆ. ಸದ್ಯ ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.