6
ತೆಲಂಗಾಣ: ಅಮ್ಮನ ಜೊತೆ ಸ್ಕೂಟಿಯಲ್ಲಿ ಕುಳಿತು ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಬಾಲಕ ಗೀತಾಂಜಲಿ ಇಂಟರ್ನ್ಯಾಷನಲ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಅಭಿಮಾನ್ಶು ರೆಡ್ಡಿ ಎಂದು ವರದಿ ತಿಳಿಸಿದೆ.
ಬೆಳಗ್ಗೆ 8 ಗಂಟೆ ಸುಮಾರಿಗೆ ಸ್ಕೂಟರ್ನಲ್ಲಿ ತನ್ನ ತಾಯಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪಲ್ಲವಿ ಸ್ಕೂಲ್ ಜಂಕ್ಷನ್ ಬಳಿ ಟಿಪ್ಪರ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.