Home News ಬಂಟ್ವಾಳ: ಅಪ್ರಾಪ್ತ ಬಾಲಕ ಆತ್ಮಹತ್ಯೆಗೆ ಶರಣು

ಬಂಟ್ವಾಳ: ಅಪ್ರಾಪ್ತ ಬಾಲಕ ಆತ್ಮಹತ್ಯೆಗೆ ಶರಣು

by admin
0 comments

ಬಂಟ್ವಾಳ: ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕ ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಪುತ್ರ ತೇಜಸ್ ಎಂದು ತಿಳಿದು ಬಂದಿದೆ.

ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ‌ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನಂತೆ ಸಂಜೆ ಮನೆಗೆ ಬಂದಿದ್ದ ಎಂದು ತಿಳಿದು ಬಂದಿದೆ.

ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ಈತ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಆತ ಮೃತಪಟ್ಟಿರುವುದಾಗಿ ವೈದ್ಯರು‌ ಪರೀಕ್ಷಿಸಿ ತಿಳಿಸಿದ್ದಾರೆ.

banner

ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ತುಂಬೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರಕರಣ ತುಂಬೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.