Home News ಬೆಟ್ಟಿಂಗ್ ಚಟ: ಆಸ್ತಿ ಮಾರಿ ಕಳ್ಳತನ ಮಾಡುತ್ತಿದ್ದ ಟೆಕ್ಕಿಯ ಬಂಧನ

ಬೆಟ್ಟಿಂಗ್ ಚಟ: ಆಸ್ತಿ ಮಾರಿ ಕಳ್ಳತನ ಮಾಡುತ್ತಿದ್ದ ಟೆಕ್ಕಿಯ ಬಂಧನ

by admin
0 comments

ಬೆಂಗಳೂರು: ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡುತ್ತಿದ್ದ ಸಾಫ್ಟ್‌ವೇರ್‌ ಇಂಜಿನಿಯರ್‌ ಒಬ್ಬನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಸಾಫ್ಟ್‌ವೇರ್‌ ಇಂಜಿನಿಯರ್ ಶಿವಮೊಗ್ಗ ಮೂಲದ ಕೆ.ಎ.ಮೂರ್ತಿ (27) ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಮೂರ್ತಿ ವಿಪರೀತ ಬೆಟ್ಟಿಂಗ್ ಚಟಕ್ಕೆ ಬಿದ್ದು ಸಾಲಗಾರನಾಗಿದ್ದ ಎಂದು ತಿಳಿದು ಬಂದಿದೆ.

ತಂದೆ ಅಣ್ಣಪ್ಪ ಅವರು ಮಗನ ಸಾಲ ತೀರಿಸಲು ಶಿವಮೊಗ್ಗದಲ್ಲಿದ್ದ ಆಸ್ತಿಯನ್ನು ಮಾರಿದ್ದರು. ಬಳಿಕ ಕೆಲಸಕ್ಕೆ ಹೋಗಿ ಜೀವನ ಸಾಗಿಸೋಣ ಎಂದು ಕುಟುಂಬ ಸಮೇತರಾಗಿ ಬೆಂಗಳೂರಿಗೆ ಬಂದಿದ್ದರು.

banner

ಬೆಂಗಳೂರಿಗೆ ಬಂದರೂ ಬೆಟ್ಟಿಂಗನ್ನು ಬಿಡದ ಮೂರ್ತಿ, ಬೆಟ್ಟಿಂಗ್ ಹಣಕ್ಕಾಗಿ ಮನೆಗಳ್ಳತನ ಮಾಡುತ್ತಿದ್ದ. ಅಲ್ಲದೇ ಅಂಗಾಳ ಪರಮೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಸರ ಕಿತ್ತಿದ್ದ. ಈ ಪ್ರಕರಣ ಸಂಬಂಧ ಆರೋಪಿ ಮೂರ್ತಿಯನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದರು.

ಆರೋಪಿಯ ವಿಚಾರಣೆ ವೇಳೆ ಹಲವು ಮನೆಗಳ್ಳತನ ಪ್ರಕರಣ ಪತ್ತೆಯಾಗಿದ್ದು, ಕೋಣನಕುಂಟೆ, ಸದ್ದುಗುಂಟರಪಾಳ್ಯ, ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ 17 ಲಕ್ಷ ರೂ. ಮೌಲ್ಯದ 245 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.