23
ವಿಟ್ಲ: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆಯೊಡ್ಡಿರುವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ.
ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದು, ಈ ಸಂದರ್ಭ ಪದ್ಮರಾಜ್ ಅಲ್ಲಿಗೆ ಬಂದು ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.