Home News ಪಿಜಿಡಬ್ಲ್ಯೂಎಫ್ಐ ನಿಂದ ಮುಷ್ಕರಕ್ಕೆ ಕರೆ: ಎಂಆರ್ ಪಿಎಲ್ ಎದುರು ಕಾರ್ಮಿಕರ ಪ್ರತಿಭಟನೆ

ಪಿಜಿಡಬ್ಲ್ಯೂಎಫ್ಐ ನಿಂದ ಮುಷ್ಕರಕ್ಕೆ ಕರೆ: ಎಂಆರ್ ಪಿಎಲ್ ಎದುರು ಕಾರ್ಮಿಕರ ಪ್ರತಿಭಟನೆ

by admin
0 comments

ಸುರತ್ಕಲ್ : ದೇಶವ್ಯಾಪಿ ಪೆಟ್ರೋಲಿಯಂ ಸೆಕ್ಟರ್ ಗಳಲ್ಲಿ ಪಿ.ಜಿ.ಡಬ್ಯು,ಎಪ್ ಐ ಬೆಳಿಗ್ಗೆ ನಿಂದ ಸಂಜೆಯವರೆಗೆ ಮುಷ್ಕರಕ್ಕೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಎಂ.ಆರ್,ಪಿ,ಎಲ್ ಕರ್ಮಚಾರಿ ಸಂಘ, ಎಂ.ಆರ್.ಪಿ.ಎಲ್. ಎಂಪ್ಲಾಯಿಸ್ ಯೂನಿಯನ್ ಹಾಗೂ ಪೆಟ್ರೋಲಿಯಂ ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಎಂ.ಆರ್.ಪಿ.ಎಲ್. ಸಂಸ್ಥೆಯ ಮುಖ್ಯ ದ್ವಾರದಲ್ಲಿ ಬುಧವಾರ ಮುಷ್ಕರ ಹಮ್ಮಿಕೊಳ್ಳಲಾಯಿತು.

ಎಂ.ಆರ್.ಪಿ.ಎಲ್. ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಶರತ್ ಜೋಗಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯ ಕೆಲವೊಂದು ಕಾನೂನುಗಳು ಕಾರ್ಮಿಕರಿಗೆ ಸಮಸ್ಯೆಯಾಗುತ್ತಿದ್ದು, ಅದನ್ನು ಸರಳೀಕರಣಗೊಳಿಸಬೇಕು. ಸಂಸ್ಥೆಯು ನಷ್ಟದಲ್ಲಿದ್ದರೆ ಅದನ್ನು ತುಂಬಲು ಎಂಪ್ಲಾಯಿಸ್ ಹಾಗೂ ಕಾರ್ಮಿಕರಿಗೆ ನೀಡುವ ಸವಲತ್ತುಗಳ ಕಡಿತಗೊಳಿಸುವುದು ಸರಿಯಲ್ಲ. ನಮ್ಮ ಎಲ್ಲಾ ಬೇಡಿಕೆಗಳಿಗೆ ಸರಕಾರ ಹಾಗೂ ಎಂ.ಅರ್.ಪಿ.ಎಲ್. ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಕಾರ್ಮಿಕ ವಿರೋಧಿ ಕಾನೂನು ಜಾರಿ ಮಾಡಿರುವುದನ್ನು ವಾಪಾಸ್ ಪಡೆಯಬೇಕು. ಸಾರ್ವಜನಿಕ ವಲಯದ ಕಂಪೆನಿಗಳನ್ನು ಖಾಸಗೀಕರಣ ಮಾಡಬಾರದು. ಕಾರ್ಮಿಕರ ಆರೋಗ್ಯ ಭದ್ರತೆಯಾಗಿರುವ ಇ.ಎಸ್.ಐ. ವ್ಯವಸ್ಥೆಯನ್ನು ಶೀಘ್ರ ಆರಂಭಿಸಬೇಕು. ಕಾರ್ಮಿಕ ಸಂಘಟನೆಯನ್ನು ರಚಿಸುವ ಹಕ್ಕನ್ನು ಕಸಿದುಕೊಳ್ಳಲಾಗಿದ್ದು, ಇದನ್ನು ರಾಜ್ಯ ಸರಕಾರ ವಾಪಾಸ್ ಪಡೆಯಬೇಕು. ಐದು ವರ್ಷಕೊಮ್ಮೆ ಹೆಚ್ಚಳವಾಗಬೇಕಿದ್ದ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು. ಇ.ಎಸ್.ಐ ವಂಚಿತರಾದ ಕಾರ್ಮಿಕರಿಗೆ ಮೆಡಿಕ್ಲೈಮ್ ಪಾಲಿಸಿ ನೀಡಬೇಕು.
ಕಾರ್ಮಿಕರಿಗೆ ಪ್ರಸ್ತುತ ನೀಡುತ್ತಿದ್ದ ಸಂಸ್ಥೆಯ ವಿಶೇಷ ಭತ್ತೆ ದ್ವಿಗುಣಗೊಳಿಸಬೇಕು. ಕಾರ್ಮಿಕನೊಬ್ಬ ಕೆಲಸದ ಸಮಯ ಅಥವಾ ಗೇಟ್ ನ ಹೊರಗಡೆ ಮರಣ ಹೊಂದಿದ್ದಲ್ಲಿ ಪ್ರಸ್ತುತ ನೀಡುತ್ತಿದ್ದ 10 ಲಕ್ಷ ಇನ್ಸೂರೆನ್ಸ್ ನ್ನು 50 ಲಕ್ಷಕ್ಕೆ ಹೆಚ್ಚಿಸಬೇಕು.ಕಾರ್ಮಿಕರು ಎತ್ತರ ಪ್ರದೇಶದಲ್ಲಿ ಕೆಲಸ ಮಾಡುವುದರಿಂದ ಎತ್ತರ ಭತ್ತೆ ನೀಡಬೇಕು. ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಿ ಕೊಡಬೇಕು. ಕಾರ್ಮಿಕರಿಗೆ ಕ್ಯಾಂಟಿನ್ ವ್ಯವಸ್ಥೆ ಸರಿ ಪಡಿಸಬೇಕು. ಮಹಿಳಾ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂಬ ಮನವಿಯನ್ನು ಎಂಆರ್ ಪಿಎಲ್ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬೇಡಿಕೆಗಳನ್ನು ಈಡೇರಿಸದ ಪಕ್ಷದಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾ ನಿರತರು ಘೋಷಿಸಿದರು.

ಈ ಸಂದರ್ಭ ಎಂ.ಆರ್.ಪಿಎಲ್ ಎಂಪ್ಲಾಯಿಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಾಯಿಪೃಥ್ವಿ, ಕರ್ಮಚಾರಿ ಸಂಘದ ಅಧ್ಯಕ್ಷ ಪ್ರಸಾದ್ ಅಂಚನ್, ಉಪಾಧ್ಯಕ್ಷ ಸುರೇಶ್ ಪೊಸ್ರಾಲ್, ಪ್ರಧಾನ ಕಾರ್ಯದರ್ಶಿ ಸುರೇಂದ್ರ ಭಟ್, ಜತೆ ಕಾರ್ಯದರ್ಶಿ ಸುನೀಲ್ ಬೋಳ, ಸುರೇಶ್ ಪೂಜಾರಿ ಕೃಷ್ಣಾಪುರ, ಕೋಶಾಧಿಕಾರಿ ಪುರುಷೋತ್ತಮ, ಎಸ್ ಸಿ ವಿಭಾಗದ ಅಧ್ಯಕ್ಷ ಸಂತೋಷ್ ಹಾಗೂ ಎಂಪ್ಲಾಯಿಸ್ ಯೂನಿಯನ್ ಪದಾಧಿಕಾರಿಗಳು ಉಪಸ್ಥಿತರಿದ್ದರು

banner

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.