46
ರಾಯಚೂರು: ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾದವರು ಅಜಿತ್(19), ಸಚಿನ್(20) ಮತ್ತು ಪ್ರಮೋದ್(20) ಎಂದು ತಿಳಿದು ಬಂದಿದೆ.
ಮೂವರು ಯುವಕರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದ ನಿವಾಸಿಗಳಾಗಿದ್ದು, ಪದವಿ ಓದುತ್ತಿದ್ದಾರೆ.
ಭಾರೀ ಮಳೆಯಿಂದ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ಕಾರ್ಯಚರಣೆಗೆ ಅಡಚಣೆ ಉಂಟಾಗಿದ್ದು, ಬೆಳಗ್ಗೆ 10 ಗಂಟೆ ಬಳಿಕ ಮಂತ್ರಾಲಯ ಪೊಲೀಸರು, ಶ್ರೀಮಠದ ಸಿಬ್ಬಂದಿ ಮತ್ತೆ ಪತ್ತೆ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.