25
ಉಪ್ಪುಂದ: ಬೈಂದೂರು ತಾಲೂಕಿನ ಕೆರ್ಗಾಲು ಗ್ರಾಮದಲ್ಲಿ ಸಂಜೆ ವೇಳೆಗೆ ಮನೆಯಲ್ಲಿ ಮಲಗಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮೃತಪಟ್ಟವರು ಕೆರ್ಗಾಲು ಗ್ರಾಮದ ನಿವಾಸಿ ಚಂದ್ರಶೇಖರ (55) ಎಂದು ತಿಳಿದು ಬಂದಿದೆ.
ಸಂಜೆ ಸಮಯದಲ್ಲಿ ಮಲಗಿದ್ದ ಅವರನ್ನು ರಾತ್ರಿ ಊಟ ಮಾಡಲೆಂದು ಪತ್ನಿ ಎಬ್ಬಿಸಲು ಹೋದಾಗ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.