Home News ಕಾರಿಗೆ ಅಪರಿಚಿತ ವಾಹನ‌ ಡಿಕ್ಕಿ: ಅರ್ಚಕ ಸ್ಥಳದಲ್ಲೇ ಮೃತ್ಯು

ಕಾರಿಗೆ ಅಪರಿಚಿತ ವಾಹನ‌ ಡಿಕ್ಕಿ: ಅರ್ಚಕ ಸ್ಥಳದಲ್ಲೇ ಮೃತ್ಯು

by admin
0 comments

ಭರಮಸಾಗರ: ದಾವಣಗೆರೆ ತಾಲೂಕು ಲಕ್ಕಮುತ್ತೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತ ಅರ್ಚಕರು ಯರಗುಂಟೆ ಗ್ರಾಮದ ಡಿ.ಎನ್.ಬಾಲಸುಬ್ರಹ್ಮಣ್ಯಂ (54) ಎಂದು ತಿಳಿದು ಬಂದಿದೆ.

ಸ್ವಿಫ್ಟ್ ಕಾರಿನಲ್ಲಿ ಬಾಲಸುಬ್ರಹ್ಮಣ್ಯಂ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತ ನಡೆಸಿದ ಅಪರಿಚಿತ ವಾಹನ ನಿಲ್ಲಿಸದೆ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡಿದ್ದ ಅರ್ಚಕರಿಗೆ ಪ್ರಥಮ ಚಿಕಿತ್ಸೆ ನೀಡುವ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

banner

ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.

ಈ‌ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.

Latest Articles

ಇದು ತಾಜಾ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿಗಳನ್ನು ಸಮಯೋಚಿತವಾಗಿ ನೇರವಾಗಿ ನಿಮಗೆ ತಲುಪಿಸುತ್ತದೆ.