21
ಉಡುಪಿ: ಎಂಜಿಎಂ ಕಾಲೇಜಿನ ಎದುರು ಮಣಿಪಾಲದ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ರೋಗಿ ಮೃತಪಟ್ಟ ಘಟನೆ ನಡೆದಿದೆ.
ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಈ ಆ್ಯಂಬುಲೆನ್ಸ್ ನಲ್ಲಿ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದಾಗ ಕಾಲೇಜಿನ ಬಳಿ ರಸ್ತೆ ಡಿವೈಡರ್ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್ಗಳಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಅಪಘಾತದ ನಂತರ, ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.